ರಾಜ್ಯ ವಿಧಾನಸಭಾ ಚುನಾವಣೆ ರಣಕಣ(Karnataka Assembly Elections) ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಅಭ್ಯರ್ಥಿಗಳು ನಾನಾ ಪ್ರಯತ್ನಗಳನ್ನು ಮಾಡಿ ಮತದಾರ ಪ್ರಭುಗಳ ಮನ ಗೆಲ್ಲಲು ಕಸರತ್ತು ಮಾಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ತಮ್ಮ ಪಕ್ಷದ ಬಾವುಟ ಹಾರಿಸಲೇಬೇಕೆಂದು ರಾಷ್ಟ್ರ ನಾಯಕರು ರಾಜ್ಯದತ್ತ ಮುಗಿಬಿದ್ದಿದ್ದಾರೆ. ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಚಾರ ಆರಂಭಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಜಗಳೂರಿನಲ್ಲಿ ಬಿಎಸ್ವೈ(BS Yediyurappa) ರೋಡ್ ಶೋ ನಡೆಯಲಿದ್ದು ಮಧ್ಯಾಹ್ನ 3 ಗಂಟೆಗೆ ಬಾಡ ಗ್ರಾಮದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ರಾತ್ರಿ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ B.S.ಯಡಿಯೂರಪ್ಪ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ಅಥಣಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಬಳಿಕ ನಾಳೆ ಮಧ್ಯಾಹ್ನ 1 ಗಂಟೆಗೆ ಕುಡಚಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ಮಾಡಿ ಮಧ್ಯಾಹ್ನ 3 ಗಂಟೆಗೆ ಖಾನಾಪುರದಲ್ಲಿ ಸಾರ್ವಜನಿಕ ಪ್ರಚಾರ ಸಭೆ ಮಾಡಲಿದ್ದಾರೆ.