ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಕಾವು ರಂಗೇರಿದ್ದು, ಮೂರು ಪಕ್ಷಗಳು ಬಿಡುವಿಲ್ಲದೆ ಅಬ್ಬರದ ಪ್ರಚಾರ ಮಾಡುತ್ತಿವೆ. ಸದ್ಯ ಬಿಜೆಪಿ ಕೂಡ ಅಖಾಡದಲ್ಲಿ ಜೋರಾಗಿ ಪ್ರಚಾರ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್ 29ರಿಂದ ರಾಜ್ಯದಲ್ಲಿ ಸರಣಿ ಸಮಾವೇಶ, ರೋಡ್ ಶೋಗಳ ಮೂಲಕ ಕೊನೆ ಕ್ಷಣದಲ್ಲಿ ಗೇಮ್ ಚೇಂಜ್ ಮಾಡಲು ಹೊರಟಿದ್ದಾರೆ. ನಿನ್ನೆ(ಮೇ 04) ರಾಜ್ಯದಲ್ಲಿ ಪ್ರಚಾರಕ್ಕೆ ಬಿಡುವು ನೀಡಿದ್ದ ಪ್ರಧಾನಿ ಇಂದು(ಮೇ 05 ಮತ್ತೆ ಮತಬೇಟೆಯ ಅಖಾಡಕ್ಕೆ ಇಳಿಯುತ್ತಿದ್ದಾರೆ.
ತಮಕೂರು, ಬಳ್ಳಾರಿಯಲ್ಲಿ ಸಮಾವೇಶ ಮುಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ರಸ್ತೆಗಳಲ್ಲಿ ವಾಹನನ ಸಂಚಾರ ನಿರ್ಬಂಧಿಸಲಾಗಿದೆ. ಮೇ 7 ಮತ್ತು 7ರಂದು ರೋಡ್ ಶೋ ಮಾಡಲು ಇಂದು ಸಂಜೆ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಇಂದು ಸಾಯಂಕಾಲ 5.30ರಿಂದ ರಾತ್ರಿ 7 ಗಂಟೆ ವರೆಗೆ ಈ ಕೆಳಕಂಡ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ನಗರ ಸಂಚಾತಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.