ಬಿಜೆಪಿ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಣೆ ಮಾಡದೇ ಇರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ದೆಹಲಿಗೆ ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ದೆಹಲಿಗೆ ಪ್ರಯಾಣ ಬೆಳೆಸಿದರು.
ಮೊದಲ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರ ಹೆಸರು ಇರದ ಕಾರಣ ಸಾಕಷ್ಟು ಅವರ ಅಭಿಮಾನಿಗಳು ಶೆಟ್ಟರ್ ನಿವಾಸಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರು ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಂಜೆ ಫೋನ್ ಮಾಡಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು. ಶೆಟ್ಟರ್ ದೂರವಾಣಿಯಲ್ಲಿಯೇ ನಿನ್ನೆ ನಡ್ಡಾ ಜೊತೆಗೆ ಮಾತನಾಡಿದ್ದು ಅವರ ಸ್ಟ್ಯಾಂಡ್ ನಾನು ತಿಳಿಸಿದ್ದರು ಎನ್ನಲಾಗಿದೆ .ನನಗೆ ಟಿಕೆಟ್ ಸಿಗೋ ಹೋಪ್ಸ್ ಇಟ್ಟುಕೊಂಡು ದೆಹಲಿಗೆ ಹೊರಟಿದ್ದಾರೆ.