ಈ ಚುನಾವಣೆಯಲ್ಲಿ ಹಲವು ಉಚಿತ ಯೋಜನೆಗಳ ಬಗ್ಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡುತ್ತಿದೆ. ಅವು ವಾರಂಟಿ ಇಲ್ಲದ ಬೋಗಸ್ ಕಾರ್ಡ್ಗಳಾಗಿವೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಇತರೆ ರಾಜ್ಯಗಳಲ್ಲಿ ಇರದ ಗ್ಯಾರೆಂಟಿ ಇಲ್ಲಿ ಏಕೆ ಎಂದು ಪ್ರಶ್ನಿಸಿದರು. ಪಟ್ಟಣದ ಹಾಗೂ ಕಲಾಲ್ ಕಾಟಿಕ್ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಶ್ರಮ ಜೀವಿಗಳಾದ ಕಲಾಲ ಸಮಾಜದ ಮುಖಂಡರು ಸ್ವಯಂಪ್ರೇರಿತರಾಗಿ ಬೆಂಬಲಿಸುತ್ತಿರುವುದು ಹರ್ಷ ತಂದಿದೆ ಎಂದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವ ಮೂಲಕ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡಿದ್ದೇನೆ. ಈ ಕ್ಷೇತ್ರದ ಜನತೆ ನನಗೆ ಮತ್ತೊಮ್ಮೆ ಅಶೀರ್ವದಿಸುವ ಮೂಲಕ ಇನ್ನು ಹೆಚ್ಚಿನ ಸೇವೆಯನ್ನು ನಿರೀಕ್ಷಿಸುತ್ತೀರಿ ಎಂಬ ಅಚಲ ವಿಶ್ವಾಸ ನನ್ನಲ್ಲಿದೆ ಎಂದು ಹೇಳಿದರು.