ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್ ಮುನಿರಾಜು ಮನೆ ಮನೆಗೆ ತೆರಳಿ ಮತಯಾಚನೆ ನೆಡೆಸುತ್ತಿದ್ದಾರೆ. ಹೌದು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಚಿಕ್ಕಬಾಣಾವರದ ಸಂತೆ ಬೀದಿ, ಮಾರುತಿನಗರ, ಗಣಪತಿ ನಗರ ಇನ್ನೂ ಮುಂತಾದ ಕಡೆ ಮನೆ ಮನೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮತಯಾಚನೆ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಎಸ್. ಮುನಿರಾಜು, ನಾನು ಶಾಸಕನಾಗಿದ್ದ ವೇಳೆ ಈ ಭಾಗದಲ್ಲಿ ಬಾಗಲಕೋಟೆಯ ಜನ್ರು ಹೆಚ್ಚಾಗಿ ವಾಸಿಸುತ್ತಿದ್ರು..
ನನ್ನ ಶಾಸಕ ಅವಧಿ ವೇಳೆ ಈ ಭಾಗದಲ್ಲಿ ಕಾಂಕ್ರೀಟ್ ರಸ್ತೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಭಾಗವು ಪುರಸಭೆ ವ್ಯಾಪ್ತಿಗೆ ಸೇರಿಸಲಾಗಿತ್ತು. ಆದರೆ ಹಾಲಿ ಶಾಸಕರು ಈ ಭಾಗದ ಕಡೆ ಗಮನ ಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಇದುವರೆಗೂ ಶುದ್ಧ ಕುಡಿಯುವ ನೀರಿನ ಘಟಕದ ವ್ಯವಸ್ಥೆ ಮಾಡಿಲ್ಲ ಈಗಲೂ ಸಹ ಇಲ್ಲಿನ ಜನ ಬೋರ್ವೆಲ್ ನೀರನ್ನು ಕುಡಿಯುತ್ತಿದ್ದಾರೆ. ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ಅರ್. ಮಂಜುನಾಥ್ ವಿರುದ್ಧ ಎಸ್.ಮುನಿರಾಜು ಕಿಡಿಕಾರಿದರು.