ದೆಹಲಿಯ ಜಂತರ್ ಮಂತರ್ನಲ್ಲಿ (Jantar Mantar) ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಭಾರತದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ (Kapil Dev) ಬೆಂಬಲ ನೀಡಿದ್ದಾರೆ. ಅವರು ಇನ್ಸ್ಟಾಗ್ರಾಮ್ನಲ್ಲಿ ಪ್ರತಿಭಟನಾ ನಿರತರ ಫೋಟೋ ಹಂಚಿಕೊಂಡು ನ್ಯಾಯ ಸಿಗುತ್ತದೆಯೇ? ಎಂದು ಬರೆದುಕೊಂಡಿದ್ದಾರೆ.
ಕುಸ್ತಿ ಫೆಡರೇಷನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ವಿನೇಶ್ ಫೋಗಟ್ (Vinesh Phogat), ಬಜರಂಗ್ ಪುನಿಯಾ (Bajrang Punia), ಸಾಕ್ಷಿ ಮಲಿಕ್ (Sakshi Malik) ಸೇರಿ ಹಲವಾರು ಕುಸ್ತಿ ಪಟುಗಳು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ದೇವ್ ಅವರಿಗೆ ಬೆಂಬಲ ನೀಡಿದ್ದು ಹೊಸ ಸಂಚಲನ ಮೂಡಿಸಿದೆ.