ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ ತನ್ನ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಕೆಲವೆಡೆ ಬಂಡಾಯ ಎದ್ದಿದ್ದಾರೆ. ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರ ಕ್ಷೇತ್ರವಾಗಿದ್ದ ಶಿಕಾರಿಪುರದಲ್ಲಿ ಬಿವೈ ವಿಜಯೇಂದ್ರ (BY Vijayendra) ವಿರುದ್ಧ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ ಎಂದು ಸ್ವತಃ ಕೈ ಕಾರ್ಯಕರ್ತರೇ ಆರೋಪಿಸುತ್ತಿದ್ದಾರೆ. ವಿಜಯೇಂದ್ರ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕಾರ್ಯಕರ್ತರು ಸಿದ್ದರಾಮಯ್ಯ (Siddaramaiah) ಅವರ ನಿವಾಸಕ್ಕೆ ತೆರಳಿ ಗದ್ದಲ ಮಾಡಿದ್ದಲ್ಲದೆ, ನಾಗರಾಜುಗೌಡ (Nagaraj Gowda) ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
